30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಬಾರ್ಯ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 29 ರಂದು ನಡೆದ ಬಾರ್ಯ, ತೆಕ್ಕಾರು, ಪುತ್ತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಾರ್ಯ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಗೋಪಾಲಕೃಷ್ಣ ಅಯ್ಯರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಸದಸ್ಯರಾದ ಶ್ರೀಮತಿ ಅನಿತಾ ಕುಶಾಲಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿದರು. ಪಕ್ಷದ ಪ್ರಮುಖರಾದ ರಾಜೇಶ್ ಪೆರ್ಮುಡ, ಗೋಪಾಲಕೃಷ್ಣ , ಜೋಯಲ್ ಮೆಂಡೋನ್ಸ ರವರು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಾರ್ಯ ಕೃಷಿ ಪತ್ತಿನ ಅಧ್ಯಕ್ಷ ಪ್ರವೀಣ್ ರೈ , ತಣ್ಣೀರುಪಂಥ ಕೃಷಿ ಪತ್ತಿನ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಶಕ್ತಿ ಕೇಂದ್ರ ಅಧ್ಯಕ್ಷರಾದ ನವೀನ್ ರೈ, ರಾಜೇಶ್ ರೈ, ಪ್ರವೀಣ್ ಬೇಂಗಿಲ , ಪ್ರಶಾಂತ್ ಪೈ, ಬಾರ್ಯ ಕೃಷಿ ಪತ್ತಿನ ನಿರ್ದೇಶಕರು, ಪಂಚಾಯತ್ ಸದಸ್ಯರು ಹಾಗೂ ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!