July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!