25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

ಮಡಂತ್ಯಾರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಡಂತ್ಯಾರು, ತಾಲೂಕು ಯುವಜನ ಒಕ್ಕೂಟ (ರಿ) ಬೆಳ್ತಂಗಡಿ ಮತ್ತು ತಾಲೂಕು ವಿವಿಧ ಸಂಘ ಸಂಸ್ಥೆಗಳು ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳು ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಆಗಸ್ಟ್ 31ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆಯಿತು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ ನವೀನ್ ಉದ್ಘಾಟಿಸಿದರು. ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಪ್ರಾಂಶುಪಾಲರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮಡಂತ್ಯಾರು ಅಧ್ಯಕ್ಷ ತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗೋಪಾಲಕೃಷ್ಣ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಮಡಂತ್ಯಾರು, ಭವಾನಿ ಶಂಕರ್ ಕಾರ್ಯನಿವರ್ಧಿಕಾರಿಗಳು ತಾ.ಪಂ. ಬೆಳ್ತಂಗಡಿ, ಪರಮೇಶ್ವರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಡಂತ್ಯಾರು, ವಂದನಿಯ ದೀಪಕ್ ಲಿಯೋಡೆಸ್, ಮುಖ್ಯ ಶಿಕ್ಷಕರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರು, ಚಿದಾನಂದ ಇಡ್ಯ, ಕಾರ್ಯದರ್ಶಿಗಳು ತಾಲೂಕು ಯುವಜನ ಒಕ್ಕೂಟ (ರಿ). ಬೆಳ್ತಂಗಡಿ, ಶ್ರೀಮತಿ ರಜನಿ, ಅದೀಕ್ಷಕರು ಯುವ ಸಬಲೀಕರಣ ಕ್ರೀಡಾ ಇಲಾಖೆ, ರಮೇಶ್ H.M , ದೈಹಿಕ ಶಿಕ್ಷಕರು Sdm ಕಾಲೇಜ್ ಉಜಿರೆ, ವಿಶ್ವನಾಥ ಹಾರಾಬೆ, ಗ್ರಾ.ಪಂ. ಸದಸ್ಯರು ಮಡಂತ್ಯಾರು, ರಾಜೀವ ಪೂಜಾರಿ, ಗ್ರಾ.ಪಂ . ಸದಸ್ಯರು ಮಡಂತ್ಯಾರು, ಡಾ. ಪ್ರಕಾಶ್ ಡಿಸೋಜ, ನೋಡಲ್ ಅಧಿಕಾರಿ, ದಸರ ಕ್ರೀಡಾಕೂಟ ಭಾಗವಹಿಸಿದರು.

ಬೆಳ್ತಂಗಡಿ ತಾ.ಪಂ. ಕಾರ್ಯನಿರ್ಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಪ್ರಜ್ವೀತ ಮತ್ತು ತಂಡ ಪ್ರಾರ್ಥಿಸಿದರು. ಉಪನ್ಯಾಸಕ ವಸಂತ ಶೆಟ್ಟಿ ನಿರೂಪಿಸಿದರು. ಶಾಂತಪ್ಪ ಮೇಲ್ವಿಚಾರಕರು, ಯುವ ಸಬಲೀಕರಣ ಕ್ರೀಡಾ ಇಲಾಖೆ ವಂದಿಸಿದರು.

Related posts

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!