25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

ಮಡಂತ್ಯಾರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಡಂತ್ಯಾರು, ತಾಲೂಕು ಯುವಜನ ಒಕ್ಕೂಟ (ರಿ) ಬೆಳ್ತಂಗಡಿ ಮತ್ತು ತಾಲೂಕು ವಿವಿಧ ಸಂಘ ಸಂಸ್ಥೆಗಳು ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳು ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಆಗಸ್ಟ್ 31ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆಯಿತು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ ನವೀನ್ ಉದ್ಘಾಟಿಸಿದರು. ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಪ್ರಾಂಶುಪಾಲರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮಡಂತ್ಯಾರು ಅಧ್ಯಕ್ಷ ತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗೋಪಾಲಕೃಷ್ಣ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಮಡಂತ್ಯಾರು, ಭವಾನಿ ಶಂಕರ್ ಕಾರ್ಯನಿವರ್ಧಿಕಾರಿಗಳು ತಾ.ಪಂ. ಬೆಳ್ತಂಗಡಿ, ಪರಮೇಶ್ವರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಡಂತ್ಯಾರು, ವಂದನಿಯ ದೀಪಕ್ ಲಿಯೋಡೆಸ್, ಮುಖ್ಯ ಶಿಕ್ಷಕರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರು, ಚಿದಾನಂದ ಇಡ್ಯ, ಕಾರ್ಯದರ್ಶಿಗಳು ತಾಲೂಕು ಯುವಜನ ಒಕ್ಕೂಟ (ರಿ). ಬೆಳ್ತಂಗಡಿ, ಶ್ರೀಮತಿ ರಜನಿ, ಅದೀಕ್ಷಕರು ಯುವ ಸಬಲೀಕರಣ ಕ್ರೀಡಾ ಇಲಾಖೆ, ರಮೇಶ್ H.M , ದೈಹಿಕ ಶಿಕ್ಷಕರು Sdm ಕಾಲೇಜ್ ಉಜಿರೆ, ವಿಶ್ವನಾಥ ಹಾರಾಬೆ, ಗ್ರಾ.ಪಂ. ಸದಸ್ಯರು ಮಡಂತ್ಯಾರು, ರಾಜೀವ ಪೂಜಾರಿ, ಗ್ರಾ.ಪಂ . ಸದಸ್ಯರು ಮಡಂತ್ಯಾರು, ಡಾ. ಪ್ರಕಾಶ್ ಡಿಸೋಜ, ನೋಡಲ್ ಅಧಿಕಾರಿ, ದಸರ ಕ್ರೀಡಾಕೂಟ ಭಾಗವಹಿಸಿದರು.

ಬೆಳ್ತಂಗಡಿ ತಾ.ಪಂ. ಕಾರ್ಯನಿರ್ಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಪ್ರಜ್ವೀತ ಮತ್ತು ತಂಡ ಪ್ರಾರ್ಥಿಸಿದರು. ಉಪನ್ಯಾಸಕ ವಸಂತ ಶೆಟ್ಟಿ ನಿರೂಪಿಸಿದರು. ಶಾಂತಪ್ಪ ಮೇಲ್ವಿಚಾರಕರು, ಯುವ ಸಬಲೀಕರಣ ಕ್ರೀಡಾ ಇಲಾಖೆ ವಂದಿಸಿದರು.

Related posts

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!