25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!