24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!