25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!