22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!