September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!