27.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳೇ ಧರ್ಮಸ್ಥಳದ ಅಪಾರ ಹಾಗೂ ಅಮೂಲ್ಯ ಸಂಪತ್ತು ಮತ್ತು ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ “ಮಾತು ಬಿಡ ಮಂಜುನಾಥ” ಎಂಬ ಮಾತು ಚಿರಪರಿಚಿತವಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನಿತ್ಯವೂ ನೆಲೆನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಧರ್ಮಸ್ಥಳದಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಸದಾ ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸುತ್ತಿರುವುದಾಗಿ ಹೆಗ್ಗಡೆಯವರು ಸ್ಪಷ್ಟಪಡಿಸಿದರು.

ಡಿ. ಸುರೇಂದ್ರ ಕುಮಾರ್ ಮತ್ತು ಶಾಸಕರುಗಳಾದ ಜಿ.ಡಿ. ಹರೀಶ್ ಗೌಡ, ಹುಣಸೂರು, ಮಂಜು, ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು, ಕೋಲಾರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತು ಮಾಜಿ ಶಾಸಕ ಕೆ. ಮಹಾದೇವ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya
error: Content is protected !!