22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳೇ ಧರ್ಮಸ್ಥಳದ ಅಪಾರ ಹಾಗೂ ಅಮೂಲ್ಯ ಸಂಪತ್ತು ಮತ್ತು ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ “ಮಾತು ಬಿಡ ಮಂಜುನಾಥ” ಎಂಬ ಮಾತು ಚಿರಪರಿಚಿತವಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನಿತ್ಯವೂ ನೆಲೆನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಧರ್ಮಸ್ಥಳದಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಸದಾ ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸುತ್ತಿರುವುದಾಗಿ ಹೆಗ್ಗಡೆಯವರು ಸ್ಪಷ್ಟಪಡಿಸಿದರು.

ಡಿ. ಸುರೇಂದ್ರ ಕುಮಾರ್ ಮತ್ತು ಶಾಸಕರುಗಳಾದ ಜಿ.ಡಿ. ಹರೀಶ್ ಗೌಡ, ಹುಣಸೂರು, ಮಂಜು, ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು, ಕೋಲಾರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತು ಮಾಜಿ ಶಾಸಕ ಕೆ. ಮಹಾದೇವ ಮೊದಲಾದವರು ಉಪಸ್ಥಿತರಿದ್ದರು.

Related posts

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
error: Content is protected !!