25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆ ಬಡಗಕಾರಂದೂರು ಇಲ್ಲಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಸರೋಜ ಇವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ಶಾಲಾ ದತ್ತು ಸ್ವೀಕರಿಸಿದ ಶ್ರೀ ಸತ್ಯ ದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ ನಾಯಕ್ ರವರು ಮತ್ತು ಆಗಮಿಸಿದ ಅತಿಥಿಗಳು ನಿವೃತ್ತ ಶಿಕ್ಷಕಿ ಯವರನ್ನು ಸನ್ಮಾನಿಸಿ, ಅವರ ಸೇವೆಯ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಗ್ರಾ ಪಂ ಸದಸ್ಯರುಗಳಾದ ಹರೀಶ್ ಆಚಾರ್ಯ ಮತ್ತು ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎನ್, ಶ್ರೀ ಧ. ಗ್ರಾ ಯೋ. ಅಳದಂಗಡಿ ವಲಯ ಮೇಲ್ವೀಚಾರಕರಾದ ಶ್ರೀಮತಿ ಯಶೋಧ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ, ಎಸ್ ಡಿ ಎಂ ಸಿ ಸದಸ್ಯರು, ಹೆತ್ತವರು, ಹಳೆ ವಿದ್ಯಾರ್ಥಿಗಳು, ಮಕ್ಕಳು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ನಿವೃತ್ತ ಶಿಕ್ಷಕಿಯ ಪರಿಚಯ -ಅನಿಸಿಕೆಯನ್ನು ಹೇಳಿದರು. ವಿದ್ಯಾರ್ಥಿನಿಯರಾದ ಕು. ಆಫಿಯಾ ಹಾಗೂ ಕು. ಸಿಂಚನಾ ಅನಿಸಿಕೆ ವ್ಯಕ್ತ ಪಡಿಸಿದರು. ಶಿಕ್ಷಕಿ ಶ್ರೀಮತಿ ಶ್ವೇತಾ ಎಚ್ ಎನ್ ಸನ್ಮಾನ ಪತ್ರ ವಾಚಿಸಿದರು. ಮುಖ್ಯ ಶಿಕ್ಷಕರಾದ ಸುರೇಶ್ ಎನ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ದಿವ್ಯಾ ಕುಮಾರಿ ಧನ್ಯವಾದವನ್ನಿತ್ತರು. ಸಹ ಶಿಕ್ಷಕಿ ಶ್ರೀಮತಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!