23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya
error: Content is protected !!