22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!