September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ವೇಣೂರು: ಆ. 27ರಂದು ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ಶವ ಕರಿಮಣೇಲು ಖಂಡಿಗ ಎಂಬಲ್ಲಿ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಆ.30ರಂದು ವರದಿಯಾಗಿದೆ.

ಕರಿಮಣೇಲು ಮನೆ ನಿವಾಸಿ ಭಾಸ್ಕರ ಹೆಗ್ಗಡೆ (೫೦ವ) ಮೃತಪಟ್ಟವರಾಗಿದ್ದಾರೆ. ಭಾಸ್ಕರ ಹೆಗ್ಡೆ ಅವರು ಆ.27ರಂದು ಸಂಜೆ ಸಂಬಂಧಿ ಪ್ರಶಾಂತ್ ಶೆಟ್ಟಿಯವರೊಂದಿಗೆ ವೇಣೂರು ಗಣೇಶೋತ್ಸವಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬರಲಿಲ್ಲ. ಈ ಹಿಂದೆ ಕೂಡಾ ಹೇಳದೇ ಕೇಳದೇ ಸಂಬಂಧಿಕರ ಮನೆ ಗೆ ಹೋಗಿ 2-3 ದಿನಗಳ ಬಳಿಕ ಮನೆಗೆ ಬರುತ್ತಿದ್ದರು ಎಂದು ಮನೆಯವರು ಹುಡುಕಾಡಲಿಲ್ಲವೆನ್ನಲಾಗಿದೆ. ಆ.30ರಂದು ಪರಿಚಯದ ಸದಾನಂದ ಎಂಬವರು ಕರಿಮಣೇಲು ಗ್ರಾಮದ ಖಂಡಿಗ ಎಂಬಲ್ಲಿ ಚರಂಡಿ ನೀರಿನಲ್ಲಿ ಬಾಸ್ಕರ ಹೆಗ್ಡೆಯವರು ಬಿದ್ದು ಮೃತಪಟ್ಟಿರುವುದಾಗಿ ತಿಳಿಸಿದ್ದಂತೆ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಭಾಸ್ಕರ ಹೆಗ್ಡೆಯವರ ಶವ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರು ಅಮಲು ಪದಾರ್ಥ ಸೇವಿಸಿಕೊಂಡು ಮನೆಯ ಕಡೆಗೆ ನಡೆದುಕೊಂಡು ಹೋಗುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಂತೆ ಕಂಡು ಬಂದಿದೆ ಎಂದು ಅಶೋಕ್ ಹೆಗ್ಡೆ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!