September 6, 2026
ವರದಿ

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳೇ ಧರ್ಮಸ್ಥಳದ ಅಪಾರ ಹಾಗೂ ಅಮೂಲ್ಯ ಸಂಪತ್ತು ಮತ್ತು ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ “ಮಾತು ಬಿಡ ಮಂಜುನಾಥ” ಎಂಬ ಮಾತು ಚಿರಪರಿಚಿತವಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನಿತ್ಯವೂ ನೆಲೆನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಧರ್ಮಸ್ಥಳದಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಸದಾ ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸುತ್ತಿರುವುದಾಗಿ ಹೆಗ್ಗಡೆಯವರು ಸ್ಪಷ್ಟಪಡಿಸಿದರು.

ಡಿ. ಸುರೇಂದ್ರ ಕುಮಾರ್ ಮತ್ತು ಶಾಸಕರುಗಳಾದ ಜಿ.ಡಿ. ಹರೀಶ್ ಗೌಡ, ಹುಣಸೂರು, ಮಂಜು, ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು, ಕೋಲಾರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತು ಮಾಜಿ ಶಾಸಕ ಕೆ. ಮಹಾದೇವ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!