23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.

ಅವರು ಭಾನುವಾರ ತಮ್ಮ ಸಾವಿರಾರು ಅಭಿಮಾನಿಗಳೊಂದಿಗೆ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳೇ ಧರ್ಮಸ್ಥಳದ ಅಪಾರ ಹಾಗೂ ಅಮೂಲ್ಯ ಸಂಪತ್ತು ಮತ್ತು ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ “ಮಾತು ಬಿಡ ಮಂಜುನಾಥ” ಎಂಬ ಮಾತು ಚಿರಪರಿಚಿತವಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನಿತ್ಯವೂ ನೆಲೆನಿಂತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಧರ್ಮಸ್ಥಳದಲ್ಲಿ ಯಾವುದೇ ತಪ್ಪು ಅಥವಾ ಅಹಿತಕರ ಘಟನೆ ನಡೆಯದಂತೆ ಸದಾ ಎಚ್ಚರಿಕೆ ಹಾಗೂ ಮುಂಜಾಗರೂಕತೆ ವಹಿಸುತ್ತಿರುವುದಾಗಿ ಹೆಗ್ಗಡೆಯವರು ಸ್ಪಷ್ಟಪಡಿಸಿದರು.

ಡಿ. ಸುರೇಂದ್ರ ಕುಮಾರ್ ಮತ್ತು ಶಾಸಕರುಗಳಾದ ಜಿ.ಡಿ. ಹರೀಶ್ ಗೌಡ, ಹುಣಸೂರು, ಮಂಜು, ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು, ಕೋಲಾರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತು ಮಾಜಿ ಶಾಸಕ ಕೆ. ಮಹಾದೇವ ಮೊದಲಾದವರು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!