July 23, 2026
ವರದಿ

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆ ಬಡಗಕಾರಂದೂರು ಇಲ್ಲಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಸರೋಜ ಇವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ಶಾಲಾ ದತ್ತು ಸ್ವೀಕರಿಸಿದ ಶ್ರೀ ಸತ್ಯ ದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ ನಾಯಕ್ ರವರು ಮತ್ತು ಆಗಮಿಸಿದ ಅತಿಥಿಗಳು ನಿವೃತ್ತ ಶಿಕ್ಷಕಿ ಯವರನ್ನು ಸನ್ಮಾನಿಸಿ, ಅವರ ಸೇವೆಯ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಗ್ರಾ ಪಂ ಸದಸ್ಯರುಗಳಾದ ಹರೀಶ್ ಆಚಾರ್ಯ ಮತ್ತು ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎನ್, ಶ್ರೀ ಧ. ಗ್ರಾ ಯೋ. ಅಳದಂಗಡಿ ವಲಯ ಮೇಲ್ವೀಚಾರಕರಾದ ಶ್ರೀಮತಿ ಯಶೋಧ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ, ಎಸ್ ಡಿ ಎಂ ಸಿ ಸದಸ್ಯರು, ಹೆತ್ತವರು, ಹಳೆ ವಿದ್ಯಾರ್ಥಿಗಳು, ಮಕ್ಕಳು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ನಿವೃತ್ತ ಶಿಕ್ಷಕಿಯ ಪರಿಚಯ -ಅನಿಸಿಕೆಯನ್ನು ಹೇಳಿದರು. ವಿದ್ಯಾರ್ಥಿನಿಯರಾದ ಕು. ಆಫಿಯಾ ಹಾಗೂ ಕು. ಸಿಂಚನಾ ಅನಿಸಿಕೆ ವ್ಯಕ್ತ ಪಡಿಸಿದರು. ಶಿಕ್ಷಕಿ ಶ್ರೀಮತಿ ಶ್ವೇತಾ ಎಚ್ ಎನ್ ಸನ್ಮಾನ ಪತ್ರ ವಾಚಿಸಿದರು. ಮುಖ್ಯ ಶಿಕ್ಷಕರಾದ ಸುರೇಶ್ ಎನ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ದಿವ್ಯಾ ಕುಮಾರಿ ಧನ್ಯವಾದವನ್ನಿತ್ತರು. ಸಹ ಶಿಕ್ಷಕಿ ಶ್ರೀಮತಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya
error: Content is protected !!