September 6, 2026
ವರದಿ

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆ ಬಡಗಕಾರಂದೂರು ಇಲ್ಲಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಸರೋಜ ಇವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ಶಾಲಾ ದತ್ತು ಸ್ವೀಕರಿಸಿದ ಶ್ರೀ ಸತ್ಯ ದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ ನಾಯಕ್ ರವರು ಮತ್ತು ಆಗಮಿಸಿದ ಅತಿಥಿಗಳು ನಿವೃತ್ತ ಶಿಕ್ಷಕಿ ಯವರನ್ನು ಸನ್ಮಾನಿಸಿ, ಅವರ ಸೇವೆಯ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಗ್ರಾ ಪಂ ಸದಸ್ಯರುಗಳಾದ ಹರೀಶ್ ಆಚಾರ್ಯ ಮತ್ತು ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎನ್, ಶ್ರೀ ಧ. ಗ್ರಾ ಯೋ. ಅಳದಂಗಡಿ ವಲಯ ಮೇಲ್ವೀಚಾರಕರಾದ ಶ್ರೀಮತಿ ಯಶೋಧ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ, ಎಸ್ ಡಿ ಎಂ ಸಿ ಸದಸ್ಯರು, ಹೆತ್ತವರು, ಹಳೆ ವಿದ್ಯಾರ್ಥಿಗಳು, ಮಕ್ಕಳು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ನಿವೃತ್ತ ಶಿಕ್ಷಕಿಯ ಪರಿಚಯ -ಅನಿಸಿಕೆಯನ್ನು ಹೇಳಿದರು. ವಿದ್ಯಾರ್ಥಿನಿಯರಾದ ಕು. ಆಫಿಯಾ ಹಾಗೂ ಕು. ಸಿಂಚನಾ ಅನಿಸಿಕೆ ವ್ಯಕ್ತ ಪಡಿಸಿದರು. ಶಿಕ್ಷಕಿ ಶ್ರೀಮತಿ ಶ್ವೇತಾ ಎಚ್ ಎನ್ ಸನ್ಮಾನ ಪತ್ರ ವಾಚಿಸಿದರು. ಮುಖ್ಯ ಶಿಕ್ಷಕರಾದ ಸುರೇಶ್ ಎನ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ದಿವ್ಯಾ ಕುಮಾರಿ ಧನ್ಯವಾದವನ್ನಿತ್ತರು. ಸಹ ಶಿಕ್ಷಕಿ ಶ್ರೀಮತಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya
error: Content is protected !!