25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶುಭಾರಂಭಸಂಘ-ಸಂಸ್ಥೆಗಳು

ಮಚ್ಚಿನ ಪ್ಯಾಕ್ಸ್ ನ ನೂತನ ಕಟ್ಟಡ ಅನಂತ ಲೋಕಾರ್ಪಣೆ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಅನಂತ” ಇದರ ಉದ್ಘಾಟನಾ ಸಮಾರಂಭ ಆ.31ರಂದು ನಡೆಯಿತು. ನೂತನ ಕಟ್ಟಡ ಮತ್ತು ಬ್ಯಾಂಕಿಂಗ್ ವಿಭಾಗ , ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಾ ಕೊರಿದರು

.

ಮಚ್ಚಿನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ಮಾರಾಟ ಮಳಿಗೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ನೋಟ್ಟು ಮತ್ತು ಉತ್ಪತ್ತಿ ಈಡಿನ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ , ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಕಿಣಿ,
ಪುತ್ತೂರು ಉಪವಿಭಾಗ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ನಿರ್ದೇಶಕರಾದ ಗಣೇಶ್ ಆರ್ಕಜೆ, ಮೋಹನ ಗೌಡ, ರಾಜೇಶ್ ನಾಯ್ಕ, ಸುಜಾತ ಪಿ. ಸಾಲ್ಯಾನ್ ಚಿತ್ತರಂಜನ್ ಕೆ., ಬೇಬಿ, ಆನಂದ, ತುಂಗಪ್ಪ, ಉಮೇಶ್, ಜಯರಾಮ, ಡಿಸಿಸಿ ಪ್ರತಿನಿಧಿ ವಲಯ ಮೇಲ್ವಿಚಾರಕ ಸಿರಜುದ್ದೀನ್

ಮಚ್ಚಿನ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಕಾಂತ್ಗ ಉಪಾಧ್ಯಕ್ಷ ಸೋಮಾವತಿ. ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸಂತಿ. ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿವಿಧ ಪ್ಯಾಕ್ಸ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

ಸಿಬ್ಬಂದಿ ಏಕಲತಾ ಎನ್ ಆರ್ ಶೆಟ್ಟಿ ಪ್ರಾರ್ಥಿಸಿದರು. ರಾಜೇಶ್ ಪೆರ್ಮುಡ ನಿರೂಪಿಸಿದರು. ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಪ್ರಸ್ತಾವಿಸಿ ಸ್ವಾಗತಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya
error: Content is protected !!