July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟದ ವಲಯ ಅಧ್ಯಕ್ಷರಾಗಿ ಚಂದಪ್ಪ ಪೂಜಾರಿ ನಾವರ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಪೂಜಾರಿ ಉಂಗಿಲಬೈಲು ಇವರು ಯೋಜನೆಯ ಪ್ರಾರಂಭಿಕ ಹಂತದ ಮಾಹಿತಿ, ಆ ಕಾಲದಲ್ಲಿ ಕ್ಷೇತ್ರದಿಂದ ಪ್ರತಿ ಗ್ರಾಮದ ಕುಟುಂಬಗಳಿಗೆ ನೀಡಿರುವ ಮೂಲಭೂತ ಸೌಲಭ್ಯ ಗಳನ್ನು ಪೂಜ್ಯರ ಈ ಒಂದು ಚಿಂತನೆ ಯಿಂದ ಇವತ್ತು ಉನ್ನತ ಜೀವನ ನಿರ್ವಹಣೆ ಮಾಡುತ್ತಿರುವ ಕುಟುಂಬಗಳ ನಿದರ್ಶನಗಳನ್ನು ವಿವರಿಸಿದರು.

ವೇದಿಕೆಯಲ್ಲಿ 8 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋಧ ಎಂ. ಸಾಧನೆಯ ವರದಿ ಮಂಡಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಪಿಲ್ಯ ಸ್ವಾಗತಿಸಿ, ಪುಷ್ಪ ನಾವರ ಧನ್ಯವಾದ ನೀಡಿದರು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
error: Content is protected !!