September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟದ ವಲಯ ಅಧ್ಯಕ್ಷರಾಗಿ ಚಂದಪ್ಪ ಪೂಜಾರಿ ನಾವರ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಪೂಜಾರಿ ಉಂಗಿಲಬೈಲು ಇವರು ಯೋಜನೆಯ ಪ್ರಾರಂಭಿಕ ಹಂತದ ಮಾಹಿತಿ, ಆ ಕಾಲದಲ್ಲಿ ಕ್ಷೇತ್ರದಿಂದ ಪ್ರತಿ ಗ್ರಾಮದ ಕುಟುಂಬಗಳಿಗೆ ನೀಡಿರುವ ಮೂಲಭೂತ ಸೌಲಭ್ಯ ಗಳನ್ನು ಪೂಜ್ಯರ ಈ ಒಂದು ಚಿಂತನೆ ಯಿಂದ ಇವತ್ತು ಉನ್ನತ ಜೀವನ ನಿರ್ವಹಣೆ ಮಾಡುತ್ತಿರುವ ಕುಟುಂಬಗಳ ನಿದರ್ಶನಗಳನ್ನು ವಿವರಿಸಿದರು.

ವೇದಿಕೆಯಲ್ಲಿ 8 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋಧ ಎಂ. ಸಾಧನೆಯ ವರದಿ ಮಂಡಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಪಿಲ್ಯ ಸ್ವಾಗತಿಸಿ, ಪುಷ್ಪ ನಾವರ ಧನ್ಯವಾದ ನೀಡಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
error: Content is protected !!