July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya
error: Content is protected !!