23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya
error: Content is protected !!