ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಸಭೆಗೆ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಕುಮಾರ್ ನಾಥ್ ಕಲಮಂಜ ಹಾಗೂ ತಾಲೂಕು ಅಧ್ಯಕ್ಷ ಉದಯ ಬಂದಾರು ನೇತೃತ್ವ ವಹಿಸಿದ್ದರು.


ಸಭೆಯ ಆರಂಭ ಶ್ರಮಿಕ ಗೀತೆಯಿಂದಾಗಿ, ಸ್ವಾಗತ ಭಾಷಣವನ್ನು ತಾಲೂಕು ಅಧ್ಯಕ್ಷರು ಸಲ್ಲಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಮನಿಹಳ್ಳ ಸಮನ್ವಯ ಸಭೆಯ ಮಹತ್ವವನ್ನು ವಿವರಿಸಿದರು. ಬಳಿಕ ಮೂರು ಯೂನಿಯನ್‌ಗಳ ವರದಿ ಮಂಡನೆಯಾದ ನಂತರ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲಕೃಷ್ಣ ಸಂಘಟನೆಯ ರಾಜ್ಯ-ಜಿಲ್ಲಾ ಮಟ್ಟದ ಚಟುವಟಿಕೆಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘಟನೆಯ ಉದ್ದೇಶ, ರಚನೆ ಹಾಗೂ ಮುಂದಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಸೆ. 14ರಂದು ಶಿವಮೊಗ್ಗದಲ್ಲಿ ನಡೆಯಲಿರುವ 70ನೇ ವರ್ಷದ ರಾಜ್ಯಮಟ್ಟದ ಕುಟುಂಬ ಸಮೇತ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ವಿಶ್ವಕರ್ಮ ದಿನಾಚರಣೆ, ನವೆಂಬರ್ 12ರಂದು ಬೆಂಗಳೂರು ರಾಜ್ಯಮಟ್ಟದ ಹೋರಾಟ ಸೇರಿದಂತೆ ಹಲವು ನಿರ್ಣಾಯಕ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

Related posts

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya
error: Content is protected !!