23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಸಭೆಗೆ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಕುಮಾರ್ ನಾಥ್ ಕಲಮಂಜ ಹಾಗೂ ತಾಲೂಕು ಅಧ್ಯಕ್ಷ ಉದಯ ಬಂದಾರು ನೇತೃತ್ವ ವಹಿಸಿದ್ದರು.


ಸಭೆಯ ಆರಂಭ ಶ್ರಮಿಕ ಗೀತೆಯಿಂದಾಗಿ, ಸ್ವಾಗತ ಭಾಷಣವನ್ನು ತಾಲೂಕು ಅಧ್ಯಕ್ಷರು ಸಲ್ಲಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಮನಿಹಳ್ಳ ಸಮನ್ವಯ ಸಭೆಯ ಮಹತ್ವವನ್ನು ವಿವರಿಸಿದರು. ಬಳಿಕ ಮೂರು ಯೂನಿಯನ್‌ಗಳ ವರದಿ ಮಂಡನೆಯಾದ ನಂತರ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲಕೃಷ್ಣ ಸಂಘಟನೆಯ ರಾಜ್ಯ-ಜಿಲ್ಲಾ ಮಟ್ಟದ ಚಟುವಟಿಕೆಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘಟನೆಯ ಉದ್ದೇಶ, ರಚನೆ ಹಾಗೂ ಮುಂದಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಸೆ. 14ರಂದು ಶಿವಮೊಗ್ಗದಲ್ಲಿ ನಡೆಯಲಿರುವ 70ನೇ ವರ್ಷದ ರಾಜ್ಯಮಟ್ಟದ ಕುಟುಂಬ ಸಮೇತ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ವಿಶ್ವಕರ್ಮ ದಿನಾಚರಣೆ, ನವೆಂಬರ್ 12ರಂದು ಬೆಂಗಳೂರು ರಾಜ್ಯಮಟ್ಟದ ಹೋರಾಟ ಸೇರಿದಂತೆ ಹಲವು ನಿರ್ಣಾಯಕ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

Related posts

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya
error: Content is protected !!