September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ರವರ ಅಧ್ಯಕ್ಷತೆಯಲ್ಲಿ ಸೆ.1ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಗಣೇಶ್ ಆರ್., ಹರಿಕೃಷ್ಣ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ರಜನಿ ಎಂ.ಆರ್., ಸವಿತಾ ಶೆಟ್ಟಿ, ಚಿದಾನಂದ ಶೆಟ್ಟಿ, ಆಶಾಲತಾ, ಮೆರಿಯಮ್ಮ, ಮೋಹನದಾಸ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿಪಿ ಸ್ವಾಗತಿಸಿದರು. ಸಿಬ್ಬಂದಿ ಮೋಹನ್ ಅನುಪಾಲನ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಸುಪ್ರಿತಾ ಜಮಾ ಖರ್ಚು ವಿವರ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!