22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟದ ವಲಯ ಅಧ್ಯಕ್ಷರಾಗಿ ಚಂದಪ್ಪ ಪೂಜಾರಿ ನಾವರ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಪೂಜಾರಿ ಉಂಗಿಲಬೈಲು ಇವರು ಯೋಜನೆಯ ಪ್ರಾರಂಭಿಕ ಹಂತದ ಮಾಹಿತಿ, ಆ ಕಾಲದಲ್ಲಿ ಕ್ಷೇತ್ರದಿಂದ ಪ್ರತಿ ಗ್ರಾಮದ ಕುಟುಂಬಗಳಿಗೆ ನೀಡಿರುವ ಮೂಲಭೂತ ಸೌಲಭ್ಯ ಗಳನ್ನು ಪೂಜ್ಯರ ಈ ಒಂದು ಚಿಂತನೆ ಯಿಂದ ಇವತ್ತು ಉನ್ನತ ಜೀವನ ನಿರ್ವಹಣೆ ಮಾಡುತ್ತಿರುವ ಕುಟುಂಬಗಳ ನಿದರ್ಶನಗಳನ್ನು ವಿವರಿಸಿದರು.

ವೇದಿಕೆಯಲ್ಲಿ 8 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋಧ ಎಂ. ಸಾಧನೆಯ ವರದಿ ಮಂಡಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಪಿಲ್ಯ ಸ್ವಾಗತಿಸಿ, ಪುಷ್ಪ ನಾವರ ಧನ್ಯವಾದ ನೀಡಿದರು.

Related posts

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!