25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ಆ.30 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!