22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!