23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!