ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!