25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya
error: Content is protected !!