July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya
error: Content is protected !!