25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿ

ಪದವಿಪೂರ್ವ ಕಾಲೇಜಗಳ ತ್ರೋಬಲ್ ಪಂದ್ಯಾಟ

ಪೂಂಜಾಲಕಟ್ಟೆ :ಬೆಳ್ತಂಗಡಿ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ ತ್ರೋ ಬಾಲ್ ಪಂದ್ಯಾಟ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಯಲ್ಲಿ ಆ 1ರಂದು ನಡೆಯಿತು.

ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ನವೀನ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ ಬದುಕಿನ ಸಮಸ್ತ ಬೆಳವಣಿಗೆಗೆ ಪೂರಕ ಎಂದರು. ಮುಖ್ಯ ಅತಿಥಿಯಾಗಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾದ ಶ್ರೀ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿವಾಕರ್, ಕೀರ್ತಿ ಬಾಳಿಗ, ಉಪಾಪ್ರಾಂಶುಪಾಲರಾದ ಉದಯ ಕುಮಾರ್, ಪ್ರಭಾರ ಮುಖ್ಯಶಿಕ್ಷಕರಾದ ಅನಿತಾ ಬರೆಟ್ಟೋ, ಪಂದ್ಯಾಟದ ತೀರ್ಪುಗಾರರು, ದೈಹಿಕ ಶಿಕ್ಷಕರು, ಸಿ ಆರ್ ಪಿ ಚೇತನ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕರಾದ ಧರನೇಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಅನ್ನಪೂರ್ಣ ಸ್ವಾಗತಿಸಿದರು. ಉಪನ್ಯಾಸಕಿ ಸುಪ್ರೀತ ವಂದನಾರ್ಪಣೆಗೈದರು. ಬಾಲಕರ ವಿಭಾಗದಲ್ಲಿ ಹತ್ತು ತಂಡ, ಬಾಲಕಿಯ ವಿಭಾಗದಲ್ಲಿ 12 ತಂಡ ಭಾಗವಹಿಸಿದರು. ಹುಡುಗರ ವಿಭಾಗದಲ್ಲಿ ಸಂತ ತೆರೆಜ ಪದವಿ ಪೂರ್ವ ಕಾಲೇಜು ವಿಜೇತರಾದರು. ಹುಡುಗಿಯರ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರು. ಹುಡುಗರ ವಿಭಾಗದಲ್ಲಿ ದ್ವೀತಿಯ ಸ್ಥಾನ ಸರಕಾರಿ ಪದವಿ ಪೂರ್ವ ಬೆಳ್ತಂಗಡಿ ಮತ್ತು ಹುಡುಗಿಯರ ವಿಭಾಗದಲ್ಲಿ ದ್ವೀತಿಯ ಸ್ಥಾನ ಸಂತ ತೆರೆಜ ಪದವಿ ಪೂರ್ವ ಪಡೆದುಕೊಂಡಿದೆ. ಸಮಾರೋಪ ಸಮಾರಂಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀ ಹನೀಪ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ,ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿವಾಕರ್, ತಾಲ್ಲೂಕು ಕೀಡಾ ಸಂಯೋಜಕರಾದ ಶ್ರೀ ಸಂದೀಪ್ ಉಪಸ್ಥಿತರಿದ್ದರು.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya
error: Content is protected !!