September 6, 2026
ಕ್ರೀಡಾ ಸುದ್ದಿ

ಪದವಿಪೂರ್ವ ಕಾಲೇಜಗಳ ತ್ರೋಬಲ್ ಪಂದ್ಯಾಟ

ಪೂಂಜಾಲಕಟ್ಟೆ :ಬೆಳ್ತಂಗಡಿ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ ತ್ರೋ ಬಾಲ್ ಪಂದ್ಯಾಟ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಯಲ್ಲಿ ಆ 1ರಂದು ನಡೆಯಿತು.

ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ನವೀನ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ ಬದುಕಿನ ಸಮಸ್ತ ಬೆಳವಣಿಗೆಗೆ ಪೂರಕ ಎಂದರು. ಮುಖ್ಯ ಅತಿಥಿಯಾಗಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾದ ಶ್ರೀ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿವಾಕರ್, ಕೀರ್ತಿ ಬಾಳಿಗ, ಉಪಾಪ್ರಾಂಶುಪಾಲರಾದ ಉದಯ ಕುಮಾರ್, ಪ್ರಭಾರ ಮುಖ್ಯಶಿಕ್ಷಕರಾದ ಅನಿತಾ ಬರೆಟ್ಟೋ, ಪಂದ್ಯಾಟದ ತೀರ್ಪುಗಾರರು, ದೈಹಿಕ ಶಿಕ್ಷಕರು, ಸಿ ಆರ್ ಪಿ ಚೇತನ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕರಾದ ಧರನೇಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಅನ್ನಪೂರ್ಣ ಸ್ವಾಗತಿಸಿದರು. ಉಪನ್ಯಾಸಕಿ ಸುಪ್ರೀತ ವಂದನಾರ್ಪಣೆಗೈದರು. ಬಾಲಕರ ವಿಭಾಗದಲ್ಲಿ ಹತ್ತು ತಂಡ, ಬಾಲಕಿಯ ವಿಭಾಗದಲ್ಲಿ 12 ತಂಡ ಭಾಗವಹಿಸಿದರು. ಹುಡುಗರ ವಿಭಾಗದಲ್ಲಿ ಸಂತ ತೆರೆಜ ಪದವಿ ಪೂರ್ವ ಕಾಲೇಜು ವಿಜೇತರಾದರು. ಹುಡುಗಿಯರ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರು. ಹುಡುಗರ ವಿಭಾಗದಲ್ಲಿ ದ್ವೀತಿಯ ಸ್ಥಾನ ಸರಕಾರಿ ಪದವಿ ಪೂರ್ವ ಬೆಳ್ತಂಗಡಿ ಮತ್ತು ಹುಡುಗಿಯರ ವಿಭಾಗದಲ್ಲಿ ದ್ವೀತಿಯ ಸ್ಥಾನ ಸಂತ ತೆರೆಜ ಪದವಿ ಪೂರ್ವ ಪಡೆದುಕೊಂಡಿದೆ. ಸಮಾರೋಪ ಸಮಾರಂಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀ ಹನೀಪ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ,ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿವಾಕರ್, ತಾಲ್ಲೂಕು ಕೀಡಾ ಸಂಯೋಜಕರಾದ ಶ್ರೀ ಸಂದೀಪ್ ಉಪಸ್ಥಿತರಿದ್ದರು.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟ

Suddi Udaya
error: Content is protected !!