25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಸಭೆಗೆ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಕುಮಾರ್ ನಾಥ್ ಕಲಮಂಜ ಹಾಗೂ ತಾಲೂಕು ಅಧ್ಯಕ್ಷ ಉದಯ ಬಂದಾರು ನೇತೃತ್ವ ವಹಿಸಿದ್ದರು.


ಸಭೆಯ ಆರಂಭ ಶ್ರಮಿಕ ಗೀತೆಯಿಂದಾಗಿ, ಸ್ವಾಗತ ಭಾಷಣವನ್ನು ತಾಲೂಕು ಅಧ್ಯಕ್ಷರು ಸಲ್ಲಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಮನಿಹಳ್ಳ ಸಮನ್ವಯ ಸಭೆಯ ಮಹತ್ವವನ್ನು ವಿವರಿಸಿದರು. ಬಳಿಕ ಮೂರು ಯೂನಿಯನ್‌ಗಳ ವರದಿ ಮಂಡನೆಯಾದ ನಂತರ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲಕೃಷ್ಣ ಸಂಘಟನೆಯ ರಾಜ್ಯ-ಜಿಲ್ಲಾ ಮಟ್ಟದ ಚಟುವಟಿಕೆಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘಟನೆಯ ಉದ್ದೇಶ, ರಚನೆ ಹಾಗೂ ಮುಂದಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಸೆ. 14ರಂದು ಶಿವಮೊಗ್ಗದಲ್ಲಿ ನಡೆಯಲಿರುವ 70ನೇ ವರ್ಷದ ರಾಜ್ಯಮಟ್ಟದ ಕುಟುಂಬ ಸಮೇತ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ವಿಶ್ವಕರ್ಮ ದಿನಾಚರಣೆ, ನವೆಂಬರ್ 12ರಂದು ಬೆಂಗಳೂರು ರಾಜ್ಯಮಟ್ಟದ ಹೋರಾಟ ಸೇರಿದಂತೆ ಹಲವು ನಿರ್ಣಾಯಕ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya
error: Content is protected !!