July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಘಟಕದ ಕಟ್ಟಡ ನಿರ್ಮಾಣ ಕಾರ್ಮಿಕರ, ರಿಕ್ಷಾ ಚಾಲಕ-ಮಾಲಕರ ಹಾಗೂ ರಬ್ಬರ್ ಕಾರ್ಮಿಕರ ಯೂನಿಯನ್‌ಗಳ ಸಂಯುಕ್ತ ಸಮನ್ವಯ ಸಭೆ ಸೆ. 1ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಸಭೆಗೆ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಕುಮಾರ್ ನಾಥ್ ಕಲಮಂಜ ಹಾಗೂ ತಾಲೂಕು ಅಧ್ಯಕ್ಷ ಉದಯ ಬಂದಾರು ನೇತೃತ್ವ ವಹಿಸಿದ್ದರು.


ಸಭೆಯ ಆರಂಭ ಶ್ರಮಿಕ ಗೀತೆಯಿಂದಾಗಿ, ಸ್ವಾಗತ ಭಾಷಣವನ್ನು ತಾಲೂಕು ಅಧ್ಯಕ್ಷರು ಸಲ್ಲಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಮನಿಹಳ್ಳ ಸಮನ್ವಯ ಸಭೆಯ ಮಹತ್ವವನ್ನು ವಿವರಿಸಿದರು. ಬಳಿಕ ಮೂರು ಯೂನಿಯನ್‌ಗಳ ವರದಿ ಮಂಡನೆಯಾದ ನಂತರ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲಕೃಷ್ಣ ಸಂಘಟನೆಯ ರಾಜ್ಯ-ಜಿಲ್ಲಾ ಮಟ್ಟದ ಚಟುವಟಿಕೆಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘಟನೆಯ ಉದ್ದೇಶ, ರಚನೆ ಹಾಗೂ ಮುಂದಿನ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಸೆ. 14ರಂದು ಶಿವಮೊಗ್ಗದಲ್ಲಿ ನಡೆಯಲಿರುವ 70ನೇ ವರ್ಷದ ರಾಜ್ಯಮಟ್ಟದ ಕುಟುಂಬ ಸಮೇತ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ವಿಶ್ವಕರ್ಮ ದಿನಾಚರಣೆ, ನವೆಂಬರ್ 12ರಂದು ಬೆಂಗಳೂರು ರಾಜ್ಯಮಟ್ಟದ ಹೋರಾಟ ಸೇರಿದಂತೆ ಹಲವು ನಿರ್ಣಾಯಕ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!