ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

ಬೆಳ್ತಂಗಡಿ : ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಇದರ ಮಾಸಿಕ ಸಭೆ ಹಾಗೂ ರೈತರ ಆರಾಧ್ಯ ದೈವ ಶ್ರೀ ಬಲರಾಮರ ಜಯಂತಿಯನ್ನು ಶ್ರೀ ರಾಮಶಾಲೆ ಸುಲ್ಕೇರಿ ಯಲ್ಲಿ ಆ. 31 ರಂದು ಭಾರತೀಯ ಕಿಸಾನ್ ಸಂಘ ಅಧ್ಯಕ್ಷ ಭಾಸ್ಕರ್ ಸಾಲಿಯಾನ್ ಶಿರ್ಲಾಲು ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘ ಇದರ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿಯವರು ಭಾಗವಹಿಸಿ ರೈತರಿಗೆ ಸಂಘಟನೆಯ ಬಗ್ಗೆ ಹಾಗೂ ಬಲರಾಮ ಜಯಂತಿಯ ಬಗ್ಗೆ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದ ಆರಂಭದಲ್ಲಿ ಬಲರಾಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಸಭೆಯಲ್ಲಿ ಭಾರತೀಯ ಕಿಸಾನ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಂಬುಜಾಕ್ಷ, ಬೆಳ್ತಂಗಡಿ ಮಹಿಳಾ ಪ್ರಮುಖ್ ಶ್ರೀಮತಿ ಶೀಲಾ ,ಜಿಲ್ಲಾ ಸದಸ್ಯರಾದ ಶಿವರಾಂ ಹೆಗ್ಡೆ ,ನಿತ್ಯಾನಂದ ನಾವರ ,ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಹಾಗೂ ತಾಲೂಕು ಉಪಾಧ್ಯಕ್ಷ ಜಯ ಸಾಲ್ಯಾನ್ ಬಳಂಜ ಉಪಸ್ಥಿತರಿದ್ದರು.

ಸಭೆಗೆ ಬೆಳ್ತಂಗಡಿ ತಾಲೂಕಿನ ಸುಮಾರು 30 ಗ್ರಾಮಗಳ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ ಹಲವಾರು ರೈತರ ಸಮಸ್ಯೆಯನ್ನ ಚರ್ಚಿಸಿ ಮುಂದಿನ ದಿನಗಳಲ್ಲಿ ಇಡೀ ತಾಲೂಕಿನಲ್ಲಿ ರೈತರ ಸಂಘಟನೆಯನ್ನು ಬಲಪಡಿಸುವುದೆಂದು ತೀರ್ಮಾನಿಸಲಾಯಿತು. ಹಲವಾರು ಇಲಾಖೆಗಳಿಗೆ, ಸರಕಾರಕ್ಕೆ ತಮ್ಮ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು ರೈತರ ಸಮಸ್ಯೆಯನ್ನ ಪರಿಹಾರ ಮಾಡಿಸುವ ದೃಷ್ಟಿಯಲ್ಲಿ ಹೋರಾಟವನ್ನು ನಡೆಸುವ ಮೂಲಕ ನಾವು ರೈತರು ಸಂಘಟಿತರಾಗಿ ನಮ್ಮ ಹಕ್ಕುಗಳ ಬಗ್ಗೆ ಹಕ್ಕೋತಾಯವನ್ನು ಮಾಡುವುದಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು. ರೈತರಿಗಾಗಿ ಒಂದು ದಿನದ ಅಭ್ಯಾಸ ವರ್ಗವನ್ನು ನಡೆಸುವುದಾಗಿ ಈ ಸಭೆಯಲ್ಲಿ ನಿರ್ಣಯಿಸಲಾಯಿತು.
ಜಯಸಾಲಿಯನ್ ಧನ್ಯವಾದವಿತ್ತರು.

Related posts

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ವೇಣೂರು ಎಸ್‌ಡಿಎಂ ಐಟಿಐ ಯಲ್ಲಿ 41ನೇ ಬ್ಯಾಚ್‌ಗೆ ಭವ್ಯ ಚಾಲನೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!