24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿ ಎಂ.ಕೆ. ರವರ ಅಧ್ಯಕ್ಷತೆಯಲ್ಲಿ ಸೆ.1ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಿ.ಎಂ. ಪೋಷಕ್ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಗಣೇಶ್ ಆರ್., ಹರಿಕೃಷ್ಣ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ರಜನಿ ಎಂ.ಆರ್., ಸವಿತಾ ಶೆಟ್ಟಿ, ಚಿದಾನಂದ ಶೆಟ್ಟಿ, ಆಶಾಲತಾ, ಮೆರಿಯಮ್ಮ, ಮೋಹನದಾಸ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿಪಿ ಸ್ವಾಗತಿಸಿದರು. ಸಿಬ್ಬಂದಿ ಮೋಹನ್ ಅನುಪಾಲನ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಸುಪ್ರಿತಾ ಜಮಾ ಖರ್ಚು ವಿವರ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya
error: Content is protected !!