ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟದ ವಲಯ ಅಧ್ಯಕ್ಷರಾಗಿ ಚಂದಪ್ಪ ಪೂಜಾರಿ ನಾವರ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಪೂಜಾರಿ ಉಂಗಿಲಬೈಲು ಇವರು ಯೋಜನೆಯ ಪ್ರಾರಂಭಿಕ ಹಂತದ ಮಾಹಿತಿ, ಆ ಕಾಲದಲ್ಲಿ ಕ್ಷೇತ್ರದಿಂದ ಪ್ರತಿ ಗ್ರಾಮದ ಕುಟುಂಬಗಳಿಗೆ ನೀಡಿರುವ ಮೂಲಭೂತ ಸೌಲಭ್ಯ ಗಳನ್ನು ಪೂಜ್ಯರ ಈ ಒಂದು ಚಿಂತನೆ ಯಿಂದ ಇವತ್ತು ಉನ್ನತ ಜೀವನ ನಿರ್ವಹಣೆ ಮಾಡುತ್ತಿರುವ ಕುಟುಂಬಗಳ ನಿದರ್ಶನಗಳನ್ನು ವಿವರಿಸಿದರು.

ವೇದಿಕೆಯಲ್ಲಿ 8 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋಧ ಎಂ. ಸಾಧನೆಯ ವರದಿ ಮಂಡಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಪಿಲ್ಯ ಸ್ವಾಗತಿಸಿ, ಪುಷ್ಪ ನಾವರ ಧನ್ಯವಾದ ನೀಡಿದರು.











