23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಭೆಯನ್ನು ಒಕ್ಕೂಟದ ಎಲ್ಲಾ ಅಧ್ಯಕ್ಷರುಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ತಾಲೂಕಿನ ಯೋಜನಾಧಿಕಾರಿ ಅಶೋಕ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟದ ವಲಯ ಅಧ್ಯಕ್ಷರಾಗಿ ಚಂದಪ್ಪ ಪೂಜಾರಿ ನಾವರ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಪೂಜಾರಿ ಉಂಗಿಲಬೈಲು ಇವರು ಯೋಜನೆಯ ಪ್ರಾರಂಭಿಕ ಹಂತದ ಮಾಹಿತಿ, ಆ ಕಾಲದಲ್ಲಿ ಕ್ಷೇತ್ರದಿಂದ ಪ್ರತಿ ಗ್ರಾಮದ ಕುಟುಂಬಗಳಿಗೆ ನೀಡಿರುವ ಮೂಲಭೂತ ಸೌಲಭ್ಯ ಗಳನ್ನು ಪೂಜ್ಯರ ಈ ಒಂದು ಚಿಂತನೆ ಯಿಂದ ಇವತ್ತು ಉನ್ನತ ಜೀವನ ನಿರ್ವಹಣೆ ಮಾಡುತ್ತಿರುವ ಕುಟುಂಬಗಳ ನಿದರ್ಶನಗಳನ್ನು ವಿವರಿಸಿದರು.

ವೇದಿಕೆಯಲ್ಲಿ 8 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಯಶೋಧ ಎಂ. ಸಾಧನೆಯ ವರದಿ ಮಂಡಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಪಿಲ್ಯ ಸ್ವಾಗತಿಸಿ, ಪುಷ್ಪ ನಾವರ ಧನ್ಯವಾದ ನೀಡಿದರು.

Related posts

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!