ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ಆ.30 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!