25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya
error: Content is protected !!