23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya
error: Content is protected !!