July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya
error: Content is protected !!