September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

ಉಜಿರೆ: ಅನುಗ್ರಹ ಶಾಲೆಯಲ್ಲಿ ಪ್ರೀ ಕೆ.ಜಿ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದನೇ ತರಗತಿಯ ಪುಟಾಣಿಗಳಿಗೆ ‘ಕಲರ‍್ಸ್ ಡೇ( ಬಣ್ಣಗಳ ದಿನ) ಯನ್ನು ವಿನೂತನ ರೀತಿಯಲ್ಲಿ ವೈಭವದಿಂದ ಆಚರಿಸಲಾಯಿತು. ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿಗಳನ್ನು ಅವರ ಹೆತ್ತವರೊಂದಿಗೆ ಅನುಗ್ರಹ ಶಾಲಾ ಮಹಾದ್ವಾರದಿಂದ ಸಭಾಭವನಕ್ಕೆ ಶಿಸ್ತಿನಿಂದ ಕರೆತರಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಸ್ವಾಗತಿಸಿದರು. ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಮರೀನಾ ಬ್ಯಾಪ್ಟಿಸ್ಟ್ ಇವರು ತಮ್ಮ ಭಾಷಣದಲ್ಲಿ ಬಣ್ಣಗಳ ಮಹತ್ವವನ್ನು ತಿಳಿಸಿ, ಮಕ್ಕಳನ್ನು ಪ್ರೀತಿಯಿಂದ ಬೆಳೆಸಬೇಕು ಎಂದು ತಿಳಿಸಿದರು. ನಂತರ ಶಾಲಾ ಸಂಚಾಲಕರಾದ ವಂದನೀಯ ಫಾ| ಅಬೆಲ್ ಲೋಬೊ ಅವರು ಕಲರ‍್ಸ್ ಡೇ ಯ ಮಹತ್ವವನ್ನು ತಿಳಿಸುತ್ತಾ ಮಕ್ಕಳ ಪ್ರಯತ್ನ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಶ್ರೀ ಅಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಶಬರಾಯ ಹಾಗೂ ಶಿಕ್ಷಕಿಯಾದ ಶ್ರೀಮತಿ ಗ್ರೇಸಿ ಸಲ್ಡಾನ್ಹಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಹುಲ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ತದನಂತರ ಪುಟಾಣಿ ಮಕ್ಕಳಿಂದ ನಡೆದ ವೈವಿಧ್ಯಮಯ ಬಣ್ಣಗಳ ವಸ್ತಾçಲಂಕಾರದಿAದ ಕೂಡಿದ ನೃತ್ಯವು ಎಲ್ಲರ ಮನರಂಜಿಸಿತು.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!