23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya
error: Content is protected !!