July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವತಿಯಿಂದ ವಿಜೃಂಭಣೆಯಿಂದ ಗೌರವಾರ್ಪಣೆ ನಡೆಯಿತು.

ಗೌರವ ಸ್ವೀಕರಿಸಿ ಧರ್ಮಧ್ಯಕ್ಷರು ಮಾತನಾಡುತ್ತಾ, “ದೇವರ ಅನುಗ್ರಹದಿಂದ ಈ ಸ್ಥಾನಕ್ಕೆ ಆಯ್ಕೆಯಾಗಿದ್ದು, ದೇವರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂಬುದು ಸಂತೋಷದ ಸಂಗತಿ. ನಾವು ಎಲ್ಲರೂ ವಿಭಿನ್ನ ಜಾತಿಗಳವರಾಗಿದ್ದರೂ, ನೀವು ಎಲ್ಲರೂ ಬಂದು ಗೌರವಿಸಿದಿದ್ದು ಹೃದಯಂಗಮವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು” ಎಂದು ತಮ್ಮ ಆಶೀರ್ವಾದಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೈನ್, ಟಿ.ಎಸ್. ನಿತ್ಯಾನಂದ ರೈ, ಧನಂಜಯ ಗೌಡ, ಶ್ರೀಧರ್ ರಾವ್, ಅಕ್ಷತ್ ರೈ, ಜೈಸನ್ ಪಟ್ಟೆರಿ, ರಾಜೇಶ್ ಶೆಟ್ಟಿ, ವೀರೇಂದ್ರ ಜೈನ್, ಸಂಜೀವ ದೇವಾಡಿಗ, ವಿನೋದ್ ಎಸ್, ಪ್ರೇಮ ಬಿ ಎಸ್, ಗಂಗಾಧರ ಗೌಡ, ಸೀನಪ್ಪ ಗೌಡ ಸೇರಿದಂತೆ ಹಲವರು ಜೆ ಸಿ ಸದಸ್ಯರು ಸಮಿತಿಯ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!