23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಡಿ.ಎಸ್.ಎ , ಡಿ. ಎಫ್. ಎ ಮುಂತಾದ ವಿಷಯಗಳಲ್ಲಿ ಕಂಪ್ಯೂಟರ್ ಶಿಕ್ಷಣದ ತರಗತಿಗಳನ್ನು ಸೆ. 1ರಂದು ಉದ್ಘಾಟನೆ ಮಾಡಲಾಯಿತು.

ಉಜಿರೆ ಐಕಾನ್ ನ್ಯಾಷನಲ್ ಬೋರ್ಡ್ ಆಫ್ ಕಂಪ್ಯೂಟರ್ ಎಜುಕೇಶನ್ ಇದರ ಮಾಲಕ ಸಂತೋಷ್ ಕಂಪ್ಯೂಟರ್ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ‘ ಮುಂದುವರಿಯುತ್ತಿರುವ ದೇಶದಲ್ಲಿ ನಮ್ಮನ್ನು ನಾವು ವೇಗವಾಗಿ ತೊಡಗಿಸಿಕೊಳ್ಳಬೇಕಾದ ಅಗತ್ಯತೆ ಇದೆ. ನಮ್ಮಲ್ಲಿ ಕೌಶಲ್ಯತೆ ಹೆಚ್ಚಾದ ಹಾಗೆ ಅವಕಾಶಗಳು ಹೆಚ್ಚಾಗುತ್ತಾ ಹೋಗುತ್ತದೆ. ಇಂದು ಕಂಪ್ಯೂಟರ್ ಜ್ಞಾನ ಇಲ್ಲದ ವಿದ್ಯಾರ್ಥಿಗಳ ಬದುಕು ಪೂರ್ಣ ಶಿಕ್ಷಣ ಎನಿಸದು. ಹಾಗಾಗಿ ಕಾಲೇಜಿನಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭವಾಗಿರುವುದು ಶಿಕ್ಷಣದ ಅವಧಿಯಲ್ಲಿಯೇ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕೋರ್ಸು ಮುಗಿಸಿಕೊಳ್ಳಲು ದೊರೆತ ಸುವರ್ಣ ಅವಕಾಶವಾಗಿದೆ ಉಪಯುಕ್ತವಾಗಿದೆ’ ಎಂದರು.

ಕಾಲೇಜಿನ ಅಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಮಾತನಾಡಿ, ‘ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಅನೇಕ ಹೊಸ ವಿಚಾರಗಳನ್ನು ಕಾಲೇಜಿನೊಳಗೆ ಆರಂಭಿಸಿಕೊಂಡಿದ್ದೇವೆ. ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಬಾರದು. ಹಾಗಾಗಿ ಕಾಲೇಜಿನೊಳಗಿನ ಅವಕಾಶಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವ ಮನಸ್ಸು ಮಾಡಬೇಕು’ ಎಂದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಚಂದನಾ ಇದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಶುಭಲಕ್ಷ್ಮಿ ವಂದಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!